Thursday, December 17, 2015

ರಂಗವಲ್ಲಿ...

ಎಷ್ಟೋ ದಿನಗಳಿಂದ ಅಂದುಕೊಂಡಿದ್ದ ರಂಗ ಗೀತೆಗಳ ಕಾರ್ಯಕ್ರಮವೊಂದು,  ಮುಂದಿನ ತಿಂಗಳು ಜನವರಿ 2 ರಂದು ಎಲ್ಲ ಅಡೆತಡೆಗಳ ನೀಗಿ ನಡೆಯಲಿದೆ. ಅದೇ "ರಂಗವಲ್ಲಿ".., ವಿಶೇಷ ಸಂಗೀತ ಸಂಜೆ..!

ಇಬ್ಬರು ರಂಗಕರ್ಮಿ, ಸಾಹಿತಿ, ಕವಿಗಳಾದ ಶ್ರೀ ಗೋಪಾಲ ವಾಜಪೇಯಿ ಹಾಗೂ ಕೆ ವೈ ನಾರಾಯಣಸ್ವಾಮಿಯವರ ಆಯ್ದ ಅಪರೂಪದ ಮಧುರವಾದ ರಂಗ ಗೀತೆಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸಲಿದ್ದಾರೆ ಉದಯೋನ್ಮುಖ ಗಾಯಕ, ನಲ್ಮೆಯ ಗೆಳೆಯ ರಾಮಚಂದ್ರ ಹಡಪದ್ ಮತ್ತು ತಂಡದವರು.

ನಮ್ಮಅವಿರತ ತಂಡದ ಮತ್ತೊಂದು ಸದಭಿರುಚಿಯ ಈ ಕಾರ್ಯಕ್ರಮಕ್ಕೆ ದೃಶ್ಯ ಕಾವ್ಯ ತಂಡದವರು ಕೈ ಜೋಡಿಸಿದ್ದಾರೆ.

ಈ ರಂಗ ಸಂಭ್ರಮಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ..

ಸ್ಥಳ :
ಸಂಸ ಬಯಲು ರಂಗಮಂದಿರ,
ರವೀಂದ್ರ ಕಲಾಕ್ಷೇತ್ರ ಆವರಣ,
ಜೆ.ಸಿ. ರಸ್ತೆ, ಬೆಂಗಳೂರು.

ದಿನಾಂಕ: 02 ಜನವರಿ 2016

ದಯವಿಟ್ಟು ಇಂದೇ ನಿಮ್ಮ ಸ್ಥಳವನ್ನು ಕಾಯ್ದಿರಿಸಿಕೊಳ್ಳಿರಿ.

ನಿಮ್ಮ ನಿರೀಕ್ಷೆಯಲ್ಲಿ,
ಅವಿರತ ತಂಡ...